ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
Cross references
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ