Cross references
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.