ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Cross references
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.