Home Bibles ಯೋಹಾನ 16:33 · ಕನ್ನಡ ಬೈಬಲ್
ಯೋಹಾನ 16:33 · ಕನ್ನಡ ಬೈಬಲ್

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

Cross references

ನ್ಯಾಯಾಧಿಪತಿಗಳು 3:2

ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್‌ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:

1 ಸಮುವೇಲ 17:51

ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.

ಕೀರ್ತನೆಗಳು 68:18

ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.

ಕೀರ್ತನೆಗಳು 85:8

ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಮೀಕ 5:5

ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.

ಲೂಕ 2:14

ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.

ಲೂಕ 19:38

ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.

ಯೋಹಾನ 12:31

ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.

ಯೋಹಾನ 14:1

ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಯೋಹಾನ 14:27

ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

ಯೋಹಾನ 15:18

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

ಯೋಹಾನ 16:11

ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.

ಅಪೋಸ್ತಲರ ಕೃತ್ಯಗಳು 9:31

ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.

ಅಪೋಸ್ತಲರ ಕೃತ್ಯಗಳು 14:22

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಅಪೋಸ್ತಲರ ಕೃತ್ಯಗಳು 23:11

ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 27:22

ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.

ಅಪೋಸ್ತಲರ ಕೃತ್ಯಗಳು 27:25

ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 8:36

ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

2 ಕೊರಿಂಥದವರಿಗೆ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.

2 ಕೊರಿಂಥದವರಿಗೆ 7:4

ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.

2 ಕೊರಿಂಥದವರಿಗೆ 13:11

ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.

ಗಲಾತ್ಯದವರಿಗೆ 1:4

ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.

ಗಲಾತ್ಯದವರಿಗೆ 6:14

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.

ಎಫೆಸದವರಿಗೆ 2:14

ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.

ಫಿಲಿಪ್ಪಿಯವರಿಗೆ 4:7

ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

ಕೊಲೊಸ್ಸೆಯವರಿಗೆ 1:20

ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.

1 ತೆಸಲೋನಿಕದವರಿಗೆ 3:4

ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.

1 ತೆಸಲೋನಿಕದವರಿಗೆ 3:7

ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.

2 ತೆಸಲೋನಿಕದವರಿಗೆ 3:16

ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.

2 ತಿಮೋಥೆಯ 3:12

ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.

ಹೆಬ್ರಿಯರಿಗೆ 7:2

ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.

ಹೆಬ್ರಿಯರಿಗೆ 11:25

ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.

ಹೆಬ್ರಿಯರಿಗೆ 13:20

ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

1 ಪೇತ್ರ 5:9

ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.

1 ಯೋಹಾನ 4:4

ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.

1 ಯೋಹಾನ 5:4

ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.

ಪ್ರಕಟನೆ 3:21

ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme