ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
Cross references
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.