ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
Cross references
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.