ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
Cross references
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.