ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
Cross references
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.