ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
Cross references
ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.