ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
Cross references
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.