ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.
Cross references
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.