ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
Cross references
ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?