ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
Cross references
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--