ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
Cross references
ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.
ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.