Home Bibles ಯೋಹಾನ 19:11 · ಕನ್ನಡ ಬೈಬಲ್
ಯೋಹಾನ 19:11 · ಕನ್ನಡ ಬೈಬಲ್

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

Cross references

ಆದಿಕಾಂಡ 45:7

ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

1 ದಿನವೃತ್ತಾಂತ 29:11

ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.

ಕೀರ್ತನೆಗಳು 39:9

ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.

ಕೀರ್ತನೆಗಳು 62:11

ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.

ಯೆರೆಮಿಯ 27:5

ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

ವಿಲಾಪಗಳು 3:37

ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?

ದಾನಿಯೇಲ 4:17

ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.

ದಾನಿಯೇಲ 4:25

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.

ದಾನಿಯೇಲ 4:32

ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.

ದಾನಿಯೇಲ 4:35

ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.

ದಾನಿಯೇಲ 5:21

ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.

ಮತ್ತಾಯ 6:13

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ಮತ್ತಾಯ 26:65

ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ

ಮತ್ತಾಯ 27:2

ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

ಮಾರ್ಕ 14:44

ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.

ಲೂಕ 7:41

ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.

ಲೂಕ 10:11

ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಲೂಕ 12:47

ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.

ಲೂಕ 22:53

ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.

ಯೋಹಾನ 3:27

ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.

ಯೋಹಾನ 7:30

ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.

ಯೋಹಾನ 9:41

ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.

ಯೋಹಾನ 11:49

ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--

ಯೋಹಾನ 15:22

ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

ಯೋಹಾನ 18:3

ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.

ಯೋಹಾನ 18:28

ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:13

ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೋಸ್ತಲರ ಕೃತ್ಯಗಳು 4:28

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

ರೋಮಾಪುರದವರಿಗೆ 11:36

ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್‌.

ರೋಮಾಪುರದವರಿಗೆ 13:1

ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.

ಹೆಬ್ರಿಯರಿಗೆ 6:4

ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

ಯಾಕೋಬ 1:17

ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.

ಯಾಕೋಬ 4:17

ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.

Interlinear

Choose Theme