ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
Cross references
ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.