ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
Cross references
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.