ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
Cross references
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು.
ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.