ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
Cross references
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.