ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?