ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
Cross references
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.