ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
Cross references
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.