Home Bibles ಯೋಹಾನ 20:9 · ಕನ್ನಡ ಬೈಬಲ್
ಯೋಹಾನ 20:9 · ಕನ್ನಡ ಬೈಬಲ್

ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.

Cross references

ಕೀರ್ತನೆಗಳು 16:10

ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಕೀರ್ತನೆಗಳು 22:15

ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

ಕೀರ್ತನೆಗಳು 22:22

ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ಯೆಶಾಯ 25:8

ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.

ಯೆಶಾಯ 26:19

ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

ಯೆಶಾಯ 53:10

ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಹೊಶೇಯ 13:14

ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯ 22:29

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕ 9:9

ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

ಮಾರ್ಕ 9:31

ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

ಲೂಕ 9:45

ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.

ಲೂಕ 18:33

ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

ಲೂಕ 24:26

ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನ 2:22

ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.

ಅಪೋಸ್ತಲರ ಕೃತ್ಯಗಳು 2:25

ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.

ಅಪೋಸ್ತಲರ ಕೃತ್ಯಗಳು 13:29

ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

1 ಕೊರಿಂಥದವರಿಗೆ 15:4

ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.

Interlinear

Choose Theme