ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
Cross references
ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.