ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
Cross references
ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.
ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.