ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
Cross references
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.