ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
Cross references
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.