ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
Cross references
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.