ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
Cross references
ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.