ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
Cross references
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.