Cross references
ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.