ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
Cross references
ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ