Home Bibles ಯೋಹಾನ 4:36 · ಕನ್ನಡ ಬೈಬಲ್
ಯೋಹಾನ 4:36 · ಕನ್ನಡ ಬೈಬಲ್

ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.

Cross references

ಸಾಮೇತಿಗಳು 11:30

ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.

ದಾನಿಯೇಲ 12:3

ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;

ರೋಮಾಪುರದವರಿಗೆ 1:13

ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.

ರೋಮಾಪುರದವರಿಗೆ 6:22

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

1 ಕೊರಿಂಥದವರಿಗೆ 3:5

ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.

1 ಕೊರಿಂಥದವರಿಗೆ 9:19

ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.

ಫಿಲಿಪ್ಪಿಯವರಿಗೆ 2:15

ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.

1 ತೆಸಲೋನಿಕದವರಿಗೆ 2:19

ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.

1 ತಿಮೋಥೆಯ 4:16

ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

2 ತಿಮೋಥೆಯ 4:7

ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.

ಯಾಕೋಬ 5:19

ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

Interlinear

Choose Theme