ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
Cross references
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.