ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
Cross references
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.