ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
Cross references
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.