ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
Cross references
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.