ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
Cross references
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ