ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
Cross references
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.