ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು;
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.