ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
Cross references
ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.