ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
Cross references
ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು;
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.