ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
Cross references
ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.