Home Bibles ಯೋಹಾನ 6:37 · ಕನ್ನಡ ಬೈಬಲ್
ಯೋಹಾನ 6:37 · ಕನ್ನಡ ಬೈಬಲ್

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

Cross references

ಕೀರ್ತನೆಗಳು 102:17

ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.

ಕೀರ್ತನೆಗಳು 110:3

ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.

ಯೆಶಾಯ 1:18

ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

ಯೆಶಾಯ 41:9

ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.

ಯೆಶಾಯ 42:3

ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.

ಯೆಶಾಯ 55:7

ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಮತ್ತಾಯ 11:28

ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ಮತ್ತಾಯ 24:24

ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.

ಲೂಕ 23:40

ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?

ಯೋಹಾನ 6:39

ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.

ಯೋಹಾನ 6:44

ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.

ಯೋಹಾನ 6:65

ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.

ಯೋಹಾನ 9:34

ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಯೋಹಾನ 10:28

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.

ಯೋಹಾನ 17:2

ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.

ಯೋಹಾನ 17:6

ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.

ಯೋಹಾನ 17:8

ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.

ಯೋಹಾನ 17:11

ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.

ಯೋಹಾನ 17:24

ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ಎಫೆಸದವರಿಗೆ 2:4

ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

ಫಿಲಿಪ್ಪಿಯವರಿಗೆ 1:29

ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.

2 ತೆಸಲೋನಿಕದವರಿಗೆ 2:13

ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ

1 ತಿಮೋಥೆಯ 1:16

ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.

2 ತಿಮೋಥೆಯ 2:19

ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

ತೀತ 3:3

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

ಹೆಬ್ರಿಯರಿಗೆ 7:25

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.

1 ಯೋಹಾನ 2:19

ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

ಪ್ರಕಟನೆ 22:17

ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.

Interlinear

Choose Theme