ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
Cross references
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.