ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
Cross references
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.