Cross references
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.