ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
Cross references
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.