ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
Cross references
ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.