ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.